News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

131

ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್‌ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.

ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…