ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.
ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.
ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.
ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…