ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…