News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

98

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್‍ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ವಿಚಿತ್ರ ಆದರೂ ಸತ್ಯ

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಶಾಕ್ ಆಗ್ತೀರಾ!ಈ ಲೇಖನಿ ಓದಿ….

    ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading