ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…