ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.