ಸುದ್ದಿ

ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

149

ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್‍ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.

ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….