News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

431

19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ.


ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ. ಅದೇ ಜಾಗದಲ್ಲಿ ಕೃತ್ಯಕ್ಕೆ ಬಳಸಲಾಗಿದ್ದ ಚಾಕು ಕೂಡ ಪತ್ತೆಯಾಗಿದೆ ಎಂದು ಶಾಪುರಾ ಪೊಲೀಸರು ತಿಳಿಸಿದ್ದರು. ಈ ಕುರಿತು ತನಿಖೆ ನಡೆಸಿದಾಗ ಮುಖದ ಸುತ್ತ ಬಟ್ಟೆಯೊಂದನ್ನು ಸುತ್ತಿಕೊಂಡು ಯುವತಿಯೊಬ್ಬಳು ಬಾತ್‍ರೂಮ್‍ನಿಂದ ಹೊರಗೆ ನಡೆದುಕೊಂಡು ಹೋಗುವುದನ್ನು ನೋಡಿದ್ದೇವೆ ಎಂದು ನೆರೆಹೊರೆಯವರು ತಿಳಿಸಿದ್ದರು. ನಂತರ ಅನುಮಾನದ ಮೇರೆಗೆ ಶಹಪುರ-ನರಸಿಂಗ್‍ಪುರ ರಸ್ತೆ ಬಳಿ ಆರೋಪಿ ಸಾಕ್ಷಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಅಭಿಲಾಷಾ ಅನಾರೋಗ್ಯಕ್ಕೆ ಒಳಗಾದ ನಂತರ ನಾನು ಸಹೋದರಿಯ ಮನೆಗೆ ಹೋಗಿದ್ದೆ. ಈ ಹಿಂದೆಯೂ ನಾನು ಸಹೋದರಿಯನ್ನು ಕೊಲೆ ಮಾಡಲು ಯತ್ನಿಸಿದ್ದೆ. ಆದರೆ ನನ್ನ ಪ್ರಯತ್ನಗಳು ವಿಫಲವಾಗಿತ್ತು ಎಂದು ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ.

ಆರೋಪಿ ಸಾಕ್ಷಿ ತನ್ನ ಬಾವ ಅನ್ಮೋಲ್ ಜೊತೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದಳು. ಈ ವಿಚಾರ ಮೃತ ಅಕ್ಕನಿಗೆ ತಿಳಿದಿತ್ತು. ಆಗ ಅಭಿಲಾಷಾ ನೀನು ಇಲ್ಲಿ ಇರುವುದು ಬೇಡ ಮನೆಗೆ ಹೋಗು ಎಂದು ಹೇಳಿದ್ದಳು. ಅಷ್ಟೇ ಅಲ್ಲದೇ ಆಕೆಯ ಸಹೋದರ ಕೂಡ ಸಾಕ್ಷಿಯನ್ನು ಮನೆಗೆ ಕಳುಹಿಸುವಂತೆ ತಿಳಿಸಿದ್ದನು. ಇದರಿಂದ ಕೋಪಗೊಂಡ ಆರೋಪಿ ಸಾಕ್ಷಿ ಸಹೋದರಿಯನ್ನು ಕೊಲೆ ಮಾಡಿದ್ದಾಳೆ ಎಂದು ಜಿಲ್ಲಾ ಎಸ್‍ಪಿ ಆರ್.ಕೆ.ನಾರ್ವಾರಿಯಾ ಹೇಳಿದ್ದಾರೆ.ಸದ್ಯಕ್ಕೆ ಆರೋಪಿ ಸಾಕ್ಷಿ ಹೇಳಿಕೆಯ ನಂತರ ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಅವಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ