ಶ್ರದ್ಧಾಂಜಲಿ

ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

102

ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಇತ್ತ ತಾರಕರತ್ನ ಶೀಘ್ರ ಗುಣಮುಖರಾಗಿ ವಾಪಸ್‌ ಬರಲಿ ಎಂದು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ನಂದಮೂರಿ ಕುಟುಂಬಸ್ಥರು ಹಾರೈಸಿದ್ದರು. ಆಸ್ಪತ್ರೆಗೆ ಆಂಧ್ರ ಪ್ರದೇಶ ಸಚಿವರು, ಮಾಜಿ ಸಚಿವರು ಸೇರಿದಂತೆ ಹಲವು ರಾಜಕೀಯ ಗಣ್ಯರು ಆಸ್ಪತ್ರೆಗ ಭೇಟಿ ನೀಡಿ ತಾರಕರತ್ನ ಅವರ ಆರೋಗ್ಯದ ಬಗ್ಗೆ ವೈದ್ಯರ ಜೊತೆ ಚರ್ಚಿಸಿದ್ದರು. ಆದ್ರೆ, ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ.

1983ರ ಫೆಬ್ರವರಿ 22ರಂದು ಜನಿಸಿದ್ದ ತೆಲುಗು ನಟ ತಾರಕರತ್ನ, ಒಕಟೋ ನಂಬರ್ ಕುರ್ರಾಡು, ಭದ್ರಾದಿ ರಾಮುಡು, ಯುವರತ್ನ ಸೇರಿದಂತೆ 20 ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ನಂದಮೂರಿ ಮೋಹನ್‌ಕೃಷ್ಣ, ನಂದಮೂರಿ ಶಾಂತಿ ಮೋಹನ್ ದಂಪತಿಯ ಪುತ್ರ, ಹೆಸರಾಂತ ನಟ, ಮಾಜಿ ಸಿಎಂ ಎನ್‌ಟಿಆರ್‌ ಮೊಮ್ಮಗ ತಾರಕರತ್ನ ಅವರು 2012ರಲ್ಲಿ ಅಲೇಖ್ಯಾ ರೆಡ್ಡಿ ಎನ್ನುವವರನ್ನು ಮದುವೆಯಾಗಿದ್ದರು.

39 ವರ್ಷ ವಯಸ್ಸಿನ ನಟ 2002 ರ ತೆಲುಗು ಸಿನಿಮಾ ಒಕಾಟೊ ನಂಬರ್ ಕುರ್ರಾಡು ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಅವರು ತಾರಕ್, ಭದ್ರಿ ರಾಮುಡು, ಮನಮಂತ ಮತ್ತು ರಾಜಾ ಚೆಯ್ಯಿ ವೇಷದಂತಹ ಸಿನಿಮಾಗಳ ಮೂಲಕ ಫೇಮಸ್ ಆದರು. ಅವರು ಇತ್ತೀಚೆಗೆ ಡಿಸ್ನಿ+ ಹಾಟ್‌ಸ್ಟಾರ್‌ನ ತೆಲುಗು ವೆಬ್ ಸಿರೀಸ್ 9 ಅವರ್ಸ್‌ನಲ್ಲಿ ಕೂಡಾ ಅವರು ನಟಿಸಿದ್ದಾರೆ. ಇನ್ನು ಅಮರಾವತಿ ಚಿತ್ರಕ್ಕಾಗಿ ತಾರಕರತ್ನ ಅವರಿಗೆ 2009ರಲ್ಲಿ ಆಂಧ್ರದ ಪ್ರತಿಷ್ಠಿತ ನಂದಿ ಅವಾರ್ಡ್‌ (ಬೆಸ್ಟ್‌ ವಿಲನ್‌) ಪ್ರಶಸ್ತಿ ದೊರೆತಿದೆ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • inspirational

    ‘ಇಂದಿರಾ ಕ್ಯಾಂಟೀನ್​​ ಬದಲು ಅನ್ನಪೂರ್ಣ ಕ್ಯಾಂಟೀನ್​​ ಎಂದು ಹೆಸರಿಡಲು ಬಿಜೆಪಿ ಚಿಂತನೆ’…!

    ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ಗೆ ಈ ಪ್ರಕರಣ ಹೋಗಬಹುದು ಕೋರ್ಟ್​​ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಾಧನೆ, ಸುದ್ದಿ

    ಸೆಮಿಫೈನಲ್‍ನಲ್ಲಿ ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…