ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…