ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…