ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…