News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

88

ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.

ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ. 
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.

ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…