ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…