ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…