ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ.
ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಾಗಿದೆ. ಆದರೆ ಸ್ವಾಮೀಜಿ ನಮಗೆ ತಂದೆ ಸಮಾನರು, ಈ ರೀತಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ವಿಡಿಯೋದಲ್ಲಿ ತನ್ನ ಹೆಸರನ್ನು ಮಾ ನಿತ್ಯ ತತ್ವಪ್ರಿಯ ಆನಂದ ಎಂದು ಹೇಳಿಕೊಂಡಿದ್ದಾಳೆ.

ನನ್ನನ್ನು ಯಾರೂ ಅಪಹರಿಸಿಲ್ಲ. ನನ್ನ ವೈಯಕ್ತಿಕ ಕಾರಣ, ಕುಟುಂಬದಲ್ಲಿ ವೈಮನಸ್ಸು ಇರುವುದರಿಂದ ಹೆತ್ತವರ ಜೊತೆ ಇರಲಾರದೆ ಆಶ್ರಮದಲ್ಲಿದ್ದೇನೆ. ನಾನು ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಇದು ನನ್ನ ಬದುಕು, ನಾನು ಇಚ್ಛೆ ಪಟ್ಟು ಈ ಬದುಕನ್ನು ಬದುಕುತ್ತಿದ್ದೇನೆ ಎಂದು ತಿಳಿಸಿದ್ದಾಳೆ.
ಸ್ವಾಮೀಜಿಯ ಮೇಲೆ ವೈಯಕ್ತಿಕ ಕಾರಣಗಳಿಂದ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅವರು ಆರೋಪಿಸಿರುವುದು ಸುಳ್ಳು, ದೂರಿನಲ್ಲಿ ಉಲ್ಲೇಖಿಸಿರುವುದು ಸಹ ಸುಳ್ಳು. ನಮ್ಮನ್ನು ಸ್ವಾಮೀಜಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಹಾಗೂ ನನ್ನ ಸಹೋದರಿ ಜೊತೆಗೆ ಇದ್ದೇವೆ. ಹೆತ್ತವರು ಖಾವಿ ಬಿಟ್ಟು ಬನ್ನಿ ಅಂತಿದ್ದಾರೆ. ಆದರೆ ನಾವು ಇದಕ್ಕೆ ತಯಾರಿಲ್ಲ ಎಂದು ಹೇಳಿದ್ದಾಳೆ.
ಪೊಲೀಸರು, ಮಾಧ್ಯಮದವರು ಎಲ್ಲರೂ ನಮಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಸುಖಾಸುಮ್ಮನೆ ಆಶ್ರಮದಲ್ಲಿರುವವರನ್ನು ಬಂಧಿಸುತ್ತಿದ್ದಾರೆ. ಇದು ಕುಟುಂಬದ ಸಮಸ್ಯೆ, ಇದಕ್ಕೂ ಆಶ್ರಮಕ್ಕೂ ಸಂಬಂಧವಿಲ್ಲ. ನನಗೆ ಖಾವಿ ಬಿಟ್ಟು ಬದುಕು ಇಲ್ಲ. ನಿತ್ಯಾನಂದ ಸ್ವಾಮೀಜಿ ನಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ನೈಜ ಪರಿಸ್ಥಿತಿ ಬಗ್ಗೆ ಎಷ್ಟೇ ಹೇಳಿದದರೂ ಪೊಲೀಸರು ಕೇಳುತ್ತಿಲ್ಲ ಎಂದು ಹೇಳಿದ್ದಾಳೆ.

ಏನಿದು ಪ್ರಕರಣ?
ನಿತ್ಯಾನಂದನ ಬಿಡದಿ ಆಶ್ರಮದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಜನಾರ್ದನ ಶರ್ಮಾ ತನ್ನ ಮಕ್ಕಳನ್ನು ನಿತ್ಯಾನಂದನ ಆಶ್ರಮಕ್ಕೆ ಬಿಟ್ಟಿದ್ದರು. ನಿತ್ಯಾನಂದನ ಮಾತಿಗೆ ಮರುಳಾಗಿ ತನ್ನ ನಾಲ್ವರು ಮಕ್ಕಳನ್ನು ಆಶ್ರಮದಲ್ಲಿ ಇಟ್ಟಿದ್ದರು. ಆಶ್ರಮದಲ್ಲಿನ ಅಕ್ರಮಗಳ ಬಗ್ಗೆ ತಿಳಿದು ಶರ್ಮಾ ಆಶ್ರಮದ ಕೆಲಸ ಬಿಟ್ಟು ಹೊರಗೆ ಬಂದಿದ್ದರು. ಬಟ್ಟು ಬರುವ ವೇಳೆ ನಾಲ್ವರು ಮಕ್ಕಳ ಪೈಕಿ 18 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಶರ್ಮಾ ಆರೋಪಿಸಿದ್ದರು. ಇವಳನ್ನು ಅಪಹರಿಸಿ, ನಮಗೆ ತಿಳಿಯದಂತೆ ಬಿಡದಿಯ ನಿತ್ಯಾನಂದ ಆಶ್ರಮದಿಂದ ಅಹಮದಾಬಾದ್ ಆಶ್ರಮಕ್ಕೆ ನನ್ನ ಮಕ್ಕಳನ್ನು ಕಳುಹಿಸಲಾಗಿದೆ ಎಂದು ಜನಾರ್ದನ ಶರ್ಮಾ ಆರೋಪಿಸಿದ್ದರು. ಅಲ್ಲದೆ ಮಕ್ಕಳನ್ನು ಹುಡುಕಿಕೊಡುವಂತೆ ಯುವತಿಯ ತಂದೆ ನಿತ್ಯಾನಂದನ ವಿರುದ್ಧ ಗುಜರಾತ್ ನಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…