ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ.
ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು ಠೇವಣಿ ಮಾಡುವುದು, ಹಣ ಹಿಂತೆಗೆದುಕೊಳ್ಳಲು ಹೆಚ್ಚು ಸಹಾಯಕವಾಗಿದೆ. ಆದರೆ ATMನಲ್ಲಿ ಹಣಹಿಂತೆಗೆದುಕೊಳ್ಳುವ ವೇಳೆ ಕೆಲವು ಮುಂಜಾಗ್ರತಾ ಕ್ರಮ ವಹಿಸದಿದ್ದರೆ ನೀವು ಮೋಸದ ಬಲೆಯಲ್ಲಿ ಬೀಳಬಹುದು.
ಹಾಗಿದ್ದರೆ ನೀವು ATM ನಲ್ಲಿ ಹಣವನ್ನು ಹಿಂತೆಗೆದುಕೊಳ್ಳುವಾಗ ಹಾಗೂ ಮೊಬೈಲ್ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ಗಮನಿಸಬೇಕಾದ ಕೆಲವು ಅಂಶಗಳು ಕೆಳಗಿವೆ ನೋಡಿ
ಕೀಪ್ಯಾಡ್ ನಲ್ಲಿ ಸ್ಕಿಮ್ಮರ್ ಇದೆಯಾ ಎಂದು ಪರೀಕ್ಷಿಸಿ ಎಟಿಎಂನಲ್ಲಿ ಹಣವನ್ನು ಹಿಂತೆಗೆದುಕೊಳ್ಳಲು ಸೀಕ್ರೆಟ್ ಪಿನ್ ನಮೂದಿಸಬೇಕಾಗುತ್ತದೆ. ಪಿನ್ ನಮೂದಿಸುವುದಕ್ಕೂ ಮುನ್ನ ಕೀಪ್ಯಾಡ್ ಸರಿಯಿದೆಯೇ ಎಂದು ಪರೀಕ್ಷಿಸಿಕೊಳ್ಳಿ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಸ್ಕಿಮ್ಮರ್ ಎಂಬ ಸಾಧನವನ್ನು ಬಳಸಿ ಜನರಿಗೆ ಮೋಸ ಎಸೆಗಲಾಗುತ್ತಿದೆ. ಕೀಪ್ಯಾಡ್ ರೀತಿಯಲ್ಲಿ ಇರುವ ಸ್ಕಿಮ್ಮರ್ ಸಾಧನವು ನೀವು ನಮೂದಿಸಿದ ಪಿನ್ ಸಂಖ್ಯೆ ಹಾಗೂ ವಿವರಗಳನ್ನು ದಾಖಲಿಸಿಕೊಳ್ಳುತ್ತದೆ. ಹಾಗೆಯೇ ಕಾರ್ಡ್ ಸ್ವೈಪ್ ಮಾಡುವ ಜಾಗದಲ್ಲೂ ಸ್ಕಿಮ್ಮರ್ ಅಳವಡಿಸಲಾಗುತ್ತದೆ. ಹೀಗಾಗಿ ಪ್ರತಿ ಬಾರಿ ATMಗೆ ತೆರಳಿದಾಗ ಒಮ್ಮೆ ಪರೀಕ್ಷಿಸಿ.
ಯಂತ್ರದ ಹತ್ತಿರ ನಿಂತು ಸೀಕ್ರೆಟ್ ಪಿನ್ ದಾಖಲಿಸಿ ನಿಮ್ಮ ಕಾರ್ಡ್ ವಿವರಗಳನ್ನು ತಿಳಿಯಲು ಕೆಲವರು ಉತ್ಸುಕರಾಗಿರುತ್ತಾರೆ. ಹೀಗಾಗಿ ಆದಷ್ಟು ATM ಮಷಿನ್ ಗೆ ಹತ್ತಿರವಾಗಿ ನಿಂತು ಹಿಂದಿನ ವ್ಯಕ್ತಿಗೆ ಕಾಣದಂತೆ ನಿಮ್ಮ ವಿವರಗಳನ್ನ ದಾಖಲಿಸಿ. ನಿಮ್ಮ ಪಿನ್ ನಂಬರ್ ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವಹಿವಾಟಿನ ನಂತರ ರಶೀದಿ ಹರಿದುಹಾಕಿ
ನೆಟ್ ಬ್ಯಾಂಕಿಂಗ್-ಮೊಬೈಲ್ ಬ್ಯಾಂಕಿಂಗ್ ಪಾಸ್ವರ್ಡ್ ಬೇರೆಯಿರಲಿ ನೀವು ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಎರಡನ್ನೂ ಬಳಸುತ್ತಿದ್ದರೆ, ಸುರಕ್ಷತಾ ದೃಷ್ಟಿಯಿಂದ ಎರಡು ವಿಭಿನ್ನ ಪಾಸ್ವರ್ಡ್ ಇರಿಸಿಕೊಂಡರೆ ಉತ್ತಮ.ನೀವು ಮೊಬೈಲ್ ಬ್ಯಾಂಕಿಂಗ್ ಮಾಡುವಾಗ ಎಂ-ಪಿನ್ ಇರುತ್ತದೆ. ಅದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಗ್ರಾಹಕರು ಮೋಸ ಹೋಗಬಾರದೆಂದು ನೋದಾಂಯಿಸಲ್ಪಟ್ಟ ಪೋನ್ ನಂಬರ್ ಹೊಂದಿದ ಮೊಬೈಲ್ನಷ್ಟೇ ಬ್ಯಾಂಕಿಂಗ್ ಅಪ್ಲಿಕೇಷನ್ ಇನ್ಸ್ಟಾಲ್ ಮಾಡಿಕೊಳ್ಳಲು ಬ್ಯಾಂಕ್ಗಳು ಅನುಮತಿ ನೀಡುತ್ತವೆ.
ಬ್ಯಾಂಕಿನಿಂದ Notification ಬರುವುದನ್ನ ಖಚಿತಪಡಿಸಿಕೊಳ್ಳಿ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡುವಾಗ ನಿಮ್ಮ ಬ್ಯಾಂಕಿಂಗ್ ಅಧಿಸೂಚನೆಯನ್ನು ಪಡೆದುಕೊಳ್ಳುವುದನ್ನ ಪರೀಕ್ಷಿಸಿಕೊಳ್ಳಿ. ಅಂದರೆ ನೀವು ತಪ್ಪಾಗಿಲಾಗಿನ್ ಆಗಿದ್ದಲ್ಲಿ ಅಧಿಸೂಚನೆ ಬರುತ್ತಿದೆಯಾ ಅಥವಾ ಇಲ್ಲವಾ ಎಂದು ಖಚಿತಪಡಿಸಿಕೊಳ್ಳಿ.
ಮೊಬೈಲ್ ಆ್ಯಪ್ ಅಪ್ಡೇಟ್ ಮಾಡುತ್ತಿರಬೇಕು ಆದಷ್ಟು ಮೊಬೈಲ್ ಆ್ಯಪ್ ಗಳನ್ನು ಅಪ್ಡೇಟ್ ಮಾಡುತ್ತಿರಿ ಮತ್ತು ವೈ-ಫೈ ಸಂಪರ್ಕಸಿಕ್ಕಾಗ ಅಪ್ಲಿಕೇಶನ್ಗಳು ಸ್ವಯಂಚಾಲಿತವಾಗಿ ಅಪ್ಡೇಟ್ ಆಗುವಂತೆ ನೀವು ಸೆಟ್ಟಿಂಗ್ ಗಳನ್ನು ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,