News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
govt

ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

67

ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಣಕಾಸು ಅಧಿಕಾರಿಗಳೊಂದಿಗೆ ಸಹ ಚರ್ಚಿಸಿ, ರಾಜ್ಯ ಸರ್ಕಾರಿ ನೌಕರರಿಗೆ , ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ಎನ್.ಪಿ.ಎಸ್ ಕುರಿತಂತೆ ಸಮಿತಿಯೊಂದನ್ನು ರಚಿಸಿ, ಅದರ ವರದಿಯನುಸಾರ ಕ್ರಮ ಕೈಗೊಳ್ಳುತ್ತೇವೆ.

ರಾಜ್ಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸುತ್ತದೆ. ಅದರಂತೆ ಈ ಕೆಳಕಂಡ ಆದೇಶವನ್ನು ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರ ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಹಣಕಾಸು ಇಲಾಖೆ ಅಧಿಕಾರಿಳ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಎಸಿಎಸ್​ ಐಎಸ್​​ಎನ್‌ ಪ್ರಸಾದ್ ಜತೆ ಧನಾತ್ಮಕವಾಗಿ ಚರ್ಚೆಯಾಗಿದೆ. ಫಿಟ್​ಮೆಂಟ್​ ಆದೇಶ, ಎನ್​ಪಿಎಸ್​ ರದ್ದು ಸಂಬಂಧ ಆದೇಶಿಸಿದ್ದಾರೆ. ಎನ್​ಪಿಎಸ್​ ಸಂಬಂಧ ಸರ್ಕಾರ ಸಮಿತಿ ರಚಿಸಿದೆ. ಸುಮಾರು 2 ತಿಂಗಳು ಕಾಲಾವಕಾಶ ನೀಡಿ ಸರ್ಕಾರ ಆದೇಶ ಮಾಡಿದೆ. ಆದೇಶ ಸಂಪೂರ್ಣ ತೃಪ್ತಿ ತಂದಿಲ್ಲ, ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ