ಸುದ್ದಿ

ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

189

ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ ನೀಡಿದೆ.

ಸ್ಮಾರ್ಟ್‌ಫೋನ್ ಮುಖ್ಯವಾಗಿ ಮಾನವನ ನಿದ್ದೆಯನ್ನು ಕದಿಯುತ್ತಿರುವುದರಿಂದಲೇ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ಅಧ್ಯಯನದಲ್ಲಿ ಹೇಳಲಾಗಿದ್ದು, ಹಾಗಾದರೆ, ಸ್ಮಾರ್ಟ್‌ಫೋನ್ ಹೆಚ್ಚು ಬಳಕೆಯಿಂದ ಉಂಟಾಗುವ ಪರಿಣಾಮಗಳೆನು? ಮಾನಸಿಕ ಖಿನ್ನತೆಗೆ ದಾರಿಯಾಗುತ್ತಿರುವುದು ಏಕೆ ಎಂಬುದನ್ನು ಇಂದಿನ ಲೇಖನದಲ್ಲಿ ತಿಳಿಯಿರಿ.ರಾತ್ರಿವೇಳೆ ಹೆಚ್ಚು ಮೊಬೈಲ್ ಬಳಕೆ ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವವರ ಪ್ರಮಾಣ ಹೆಚ್ಚಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಶೇ. 75 ಕ್ಕಿಂತ ಹೆಚ್ಚು ಯುವಜನರು ರಾತ್ರಿ ಸ್ಮಾರ್ಟ್‌ಫೋನ್ ಬಳಕೆಯಿಂದ ನಿದ್ದೆ ಮಾಡುತ್ತಿಲ್ಲ ಎಂಬ ಶಾಕಿಂಗ್ ವಿಷಯವನ್ನು ಅಧ್ಯಯನವು ತಿಳಿಸಿದೆ.

ಸಾವಿಗೆ ಸ್ಮಾರ್ಟ್‌ಫೋನ್ ದಾರಿ ನಿದ್ದೆ ಮಾಡುವ ಸಮಯದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಾಡುವ ಪ್ರಮಾಣ ಹೆಚ್ಚಿರುವುದರಿಂದ ಮಾನವನ ಆರೋಗ್ಯ ಸ್ಥಿತಿ ಏರುಪೇರಾಗುತ್ತಿದೆ. ಇದು ಮಾನವನಲ್ಲಿ ಖಿನ್ನತೆ ಮೂಡಲು ಪ್ರಮುಖ ಕಾರಣವಾಗುತ್ತಿರುವ ಪರಿಣಾಮದಿಂದ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗಿದೆ.ಖಿನ್ನತೆಗೆ ಜಾರಲು ಕಾರಣ ಏನು? ರಾತ್ರಿ ಸಮಯದಲ್ಲಿ ಸರಿಯಾಗಿ ನಿದ್ದೆ ಮಾಡದಿದ್ದರೆ ಮಾನವನ ಮೆದುಳಿನ ಮೇಲೆ ಹೆಚ್ಚು ಒತ್ತಡ ಬೀಳಲಿದೆ. ಇದರಿಂದ ನೆನಪಿನ ಶಕ್ತಿ ಮತ್ತು ಏಕಾಗ್ರತೆ ಮೇಲೆ ಪರಿಣಾಮಗಳು ಬೀರುತ್ತದೆ. ಹೀಗೆ ಪ್ರತಿದಿನವೂ ಅಭ್ಯಾಸವಾಗುತ್ತಾ ಓದರೆ ಮಾನವನ ಮೆದುಳು ಖಿನ್ನತೆಗೆ ಜಾರುತ್ತದೆ ಎಂದು ಹೇಳಲಾಗಿದೆ.

ಆರೋಗ್ಯ ಸಮಸ್ಯೆಗೆ ದಾರಿ ಮಾನವನ ದೇಹಕ್ಕೆ ಸರಿಯಾಗಿ ನಿದ್ದೆ ಸಿಗದಿದ್ದರೆ ಅವನ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಮಧುಮೇಹ, ತಲೆನೊವ್ವುಗಳಂತಹ ಸಮಸ್ಯೆಗಳ ಜೊತೆಗೆ ಕ್ಯಾನ್ಸರ್‌ ಮತ್ತು ಬಬ್ರೈನ್ ಟ್ಯೂಮರ್‌ನಂತಹ ದೊಡ್ಡ ರೋಗಗಳೂ ಕೂಡ ಮಾನವನನ್ನು ಕಾಡುತ್ತವೆ ಎಂದು ವರದಿ ಹೇಳಿದೆ. ಇದು ಕೂಡ ಮುಂದೆ ಖಿನ್ನತೆಗೆ ಕಾರಣವಾಗುತ್ತದೆ. ಸ್ಮಾರ್ಟ್‌ಫೋನ್ ಬಳಕೆಗೆ ಮಿತಿಇದೆ ಮಾನವನಿಗೆ ಸ್ಮಾರ್ಟ್‌ಫೋನ್ ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದು ನಿಜ. ಆದರೆ, ಮಾನವನ ದೇಹಕ್ಕೆ ಮತ್ತು ಮನಸ್ಸಿಗೆ ಉಲ್ಲಾಸ ನೀಡುವ ನಿದ್ದೆಯನ್ನು ಕೂಡ ಈ ಸ್ಮಾರ್ಟ್‌ಫೋನ್ ಕಸಿದುಕೊಳ್ಳುತ್ತಿರುವುದು ಎಚ್ಚರಿಕೆಯ ವಿಷಯವಾಗಿದೆ. ಹಾಗಾಗಿ, ಸ್ಮಾರ್ಟ್‌ಫೋನ್ ಬಳಕೆಗೆ ಒಂದು ಮಿತಿಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಸುದ್ದಿ

    ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

    ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…

  • ಸ್ಪೂರ್ತಿ

    ಓದಿಲ್ಲ,ಬರೆದಿಲ್ಲ ಈ ಅಜ್ಜಿಗೆ ಸಿಕ್ಕಿದೆ ರಾಷ್ಟ್ರ ಪ್ರಶಸ್ತಿ ಗರಿಮೆ..!ಎಲ್ಲರಿಗೂ ಸ್ಪೂರ್ತಿ ಈ ಅಜ್ಜಿ…ತಿಳಿಯಲು ಈ ಲೇಖನ ಓದಿ…

    ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…