News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

49

ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಪ್ರತಿ ಲೀಟರ್‌ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…