News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

50

ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.

ಪ್ರತಿ ಲೀಟರ್‌ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…