ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ. ಹೈದ್ರಾಬಾದ್ ಮೂಲದ ಮೆಕ್ಯಾನಿಕಲ್ ಎಂಜಿನಿಯರ್ ಪ್ರೋ. ಸತೀಶ್ ಎನ್ನುವರೇ ಇದರ ರೂವಾರಿಯಾಗಿದ್ದು, ನಗರದಲ್ಲಿ ದಿನಂಪ್ರತಿ ಸಂಗ್ರಹವಾಗುವ ಪ್ಲಾಸ್ಟಿಕ್ ತ್ಯಾಜ್ಯದಿಂದಲೇ ಪೆಟ್ರೋಲ್ ಸಿದ್ದಪಡಿಸುತ್ತಿದ್ದಾರೆ.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಸಮಸ್ಯೆಯನ್ನು ತಗ್ಗಿಸುವುದು ಹೇಗೆ ಪ್ರಶ್ನೆ ಮುಂದಿಟ್ಟು ಹೊಸ ಪ್ರಯತ್ನ ನಡೆಸುತ್ತಿದ್ದಾಗಲೇ ಪೆಟ್ರೋಲ್ ಉತ್ಪಾದನೆ ಸಾಧ್ಯತೆ ಕುರಿತು ಎಂಜಿನಿಯರ್ ಸತೀಸ್ ಅವರು ಹೊಸ ಪ್ರಯೋಗ ಮಾಡಿ ಇಂತದೊಂದು ಮಹತ್ವದ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ.ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತಾಜ್ಯವನ್ನು ಪ್ರಮುಖ ಮೂರು ಹಂತಗಳಲ್ಲಿ ರಸಾಯನಿಕ ಪ್ರಕ್ರಿಯೆಗಳ ಮೂಲಕ ಸಂಸ್ಕರಿಸಿ ಮಾಡಿದ ನಂತರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಸಿದ್ದಪಡಿಸಲಾಗಿದ್ದು, ಪರಿಸರಕ್ಕೆ ಮಾರಕವಾಗದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಈ ಹೊಸ ಪೆಟ್ರೋಲ್ ಮಾದರಿಯನ್ನು ಸಿದ್ದಗೊಳಿಸಲಾಗಿದೆ.

2016ರಿಂದಲೇ ಎಂಜಿನಿಯರ್ ಸತೀಶ್ ಅವರು ಈ ಪ್ರಯೋಗ ಮಾಡುತ್ತಿದ್ದು, ಪ್ರತಿ ದಿನ ಕನಿಷ್ಠ 200 ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಸ್ಕರಿಸಿ ಕನಿಷ್ಠ 200 ಲೀಟರ್ ಪೆಟ್ರೋಲ್ ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಮೂರುವರೇ ವರ್ಷಗಳಲ್ಲಿ ಬರೋಬ್ಬರಿ 50 ಟನ್ ಪ್ಲಾಸ್ಟಿಕ್ ಅನ್ನು ಪೆಟ್ರೋಲ್ ಆಗಿ ಪರಿವರ್ತನೆ ಮಾಡಿರುವ ಪ್ರೋ. ಸತೀಸ್ ಅವರು, ಅತಿ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದಾರೆ.
ಪ್ರತಿ ಲೀಟರ್ಗೆ ರೂ. 40ರಿಂದ ರೂ. 50 ಮಾತ್ರ..! ಸದ್ಯ ಪ್ರೋ. ಸತೀಶ್ ಅವರು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ಗೆ ರೂ.40ರಿಂದ ರೂ.50ಕ್ಕೆ ಮಾರಾಟ ಮಾಡುತ್ತಿದ್ದು, ಸ್ಥಳೀಯ ಕೈಗಾರಿಕಾ ಕೇಂದ್ರಗಳೇ ಇದರ ಪ್ರಮುಖ ಗ್ರಾಹಕರಾಗಿದ್ದಾರೆ.ವಾಹನಗಳಲ್ಲಿ ಬಳಕೆ ಯೋಗ್ಯವೇ? ಪ್ಲಾಸ್ಟಿಕ್ನಿಂದ ತಯಾರಿಸಲಾದ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಲ್ಲಿ ಬಳಕೆ ಕುರಿತಂತೆ ಹಲವು ಪ್ರಯತ್ನಗಳು ನಡೆದಿದ್ದರೂ ಇದುವರೆಗೂ ಅಧಿಕೃತವಾದ ಟೆಸ್ಟಿಂಗ್ ನಡೆಸಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಈ ಕುರಿತು ಅಧಿಕೃತ ಟೆಸ್ಟಿಂಗ್ ನಡೆಸಿದ ನಂತರವಷ್ಟೇ ಇದು ವಾಹನಗಳಲ್ಲಿ ಬಳಕೆಗೆ ಯೋಗ್ಯವೇ ಎಂಬುದು ತಿಳಿದು ಬರಲಿದೆ.

ಸದ್ಯಕ್ಕೆ ಕೈಗಾರಿಕೊದ್ಯಮದಲ್ಲಿ ಮಾತ್ರವೇ ಈ ತೈಲ ಉತ್ಪನ್ನ ಬಳಕೆ ಮಾಡಲಾಗುತ್ತಿದ್ದು, ಒಂದು ವೇಳೆ ವಾಹನಗಳಲ್ಲಿಯೂ ಬಳಕೆಗೆ ಯೋಗ್ಯ ಎಂದಾದಲ್ಲಿ ಇದೊಂದು ಮಹತ್ವದ ಯೋಜನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಯಾಕೆಂದ್ರೆ ದೇಶಾದ್ಯಂತ ದಿನಂಪ್ರತಿ ಉತ್ಪಾದನೆಯಾಗುವ ಸಾವಿರಾರು ಟನ್ ಪ್ಲಾಸ್ಟಿಕ್ ತ್ಯಾಜ್ಯಕ್ಕೂ ಮುಂದೊಂದು ದಿನ ಭಾರೀ ಬೇಡಿಕೆ ಬಂದರೂ ಅಚ್ಚರಿಯಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ