ಸುದ್ದಿ

ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

46

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇಯ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಈ ಮೊದಲು ಅಮೇರಿಕಾ, ಚೀನಾ ಹಾಗೂ ರಷ್ಯಾ ಬಳಿ ಮಾತ್ರವೇ ಈ ಸಾಮರ್ಥ್ಯವಿತ್ತು. ಭಾರತ ಕೂಡ ಲೋ ಆರ್ಬಿಟ್‌ ​ಸ್ಯಾಟಲೈಟ್‌ಗಳನ್ನ ಅಂತರೀಕ್ಷದಲ್ಲೇ ಹೊಡೆದುರುಳಿಸುವ ಕ್ಷಿಪಣಿ ಬಗ್ಗೆ ಹಲವು ವರ್ಷಗಳಿಂದ ಪರೀಕ್ಷೆ ನಡೆಸ್ತಾ ಇತ್ತು. ಇದಕ್ಕಾಗಿಯೇ ಶಕ್ತಿ ಮಿಷನ್‌ ಅನ್ನೋ ಯೋಜನೆ ಕೈಗೊಂಡಿತ್ತು. ಇದೀಗ ಮಿಷನ್ ಸಕ್ಸಸ್ ಆಗಿದೆ.

ಶಕ್ತಿ ಮಿಷನ್‌ ಒಂದು ಶತ್ರು ರಾಷ್ಟ್ರಗಳ ಸ್ಯಾಟಲೈಟ್‌ ಪ್ರತಿರೋಧಕ ತಂತ್ರಜ್ಞಾನವಾಗಿದ್ದು, ಈ ಕ್ಷಿಪಣಿಗಳು ಶತ್ರು ರಾಷ್ಟ್ರದ ಉಪಗ್ರಹಗಳನ್ನ ಅಂತರೀಕ್ಷದಲ್ಲೇ ಹೊಡೆದು ಹಾಕಬಲ್ಲವು. ಇವತ್ತು ನಡೆದ ಆಪರೇಷನ್‌ನಲ್ಲಿ ಮೂರೇ ನಿಮಿಷದಲ್ಲಿ ಶಕ್ತಿ ಮಿಷನ್‌​​ ಯಶಸ್ವಿಯಾಗಿದೆ. ಇದರಿಂದ ದೇಶದ ಗೌರವ ಹೆಚ್ಚಾಗಿದೆ.
ಪ್ರಯೋಗಾರ್ಥ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಇನ್ನು ಮುಂದೆ ಶತ್ರು ರಾಷ್ಟ್ರಗಳ ಉಪಗ್ರಹವನ್ನು ಭಾರತ ಬಾಹ್ಯಾಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯವನ್ನು ಪಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.