ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ