ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…