ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.
ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್ವರೆಗಿನ ಬಳಕೆಗೆ ಪ್ರತಿ ಯೂನಿಟ್ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.
ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್ವರಗೆ ರೂ.36, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.
ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…