ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…