ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.

ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.

ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ

ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…