ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..

ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು

ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.

ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…