ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ..

ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ.
ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು ಲೀಟರ್ ಮೇಲೆ 1 ರೂಪಾಯಿ ದರ ಏರಿಕೆಯಾಗಿದೆ. ಇನ್ನುಳಿದಂತೆ, ತಂಬಾಕು, ತರಕಾರಿ, ಹಣ್ಣಿನ ಜ್ಯೂಸ್, ಸನ್ ಗ್ಲಾಸ್, ಸುಗಂಧ ದ್ರವ್ಯಗಳು, ಅಡುಗೆ ತಯಾರಿಸಲು ಬಳಸುವ ವಸ್ತುಗಳು, ಮೆನಿಕ್ಯೂರ್ ಮತ್ತು ಪೆಡಿಕ್ಯೂರ್,ಸಿಸಿ ಕ್ಯಾಮರಾ ದುಬಾರಿ,ಪೈಪ್, ಟೈಲ್ಸ್, ಡಿವಿಡಿ ಬೆಲೆ ಏರಿಕೆ. ಮದ್ಯ, ಸಿಗರೇಟ್,ಮೊಬೈಲ್, ಟಿವಿ, ಫ್ರಿಡ್ಜ್, ರಬ್ಬರ್ ಬೆಲೆ ಏರಿಕೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳು

ಸಿಸಿಟಿವಿ, HD ಕ್ಯಾಮೆರಾ, ಫರ್ನಿಚರ್ಸ್,ಆಟೋ ಪಾರ್ಟ್ಸ್,ವಾಟರ್ ಬ್ಲಾಕಿಂಗ್ ಟೇಪ್ಸ್, ಸೆರಾಮಿಕ್ ಟೈಲ್ಸ್,ಗೋಡಂಬಿ, ತಾಳೆ ಎಣ್ಣೆ, ಇಂಡಸ್ಟ್ರಿಯಲ್ ಆಸಿಡ್,ಪ್ಲಾಸ್ಟಿಕ್, ಸೀಲಿಂಗ್ ಕವರ್, ಫ್ಲೋರ್ ಕವರ್,AC ಹಾಗೂ ಎಲೆಕ್ಟ್ರಿಕ್ ವೈರ್ಗಳ ಬೆಲೆ ಏರಿಕೆ,ವಾಹನಗಳ ವೈಪರ್, ಸಿಗ್ನಲಿಂಗ್ ವಸ್ತುಗಳು ತುಟ್ಟಿ,ಇಂಜಿನ್ ಚಾಸಿಸ್, ವಾಹನದ ಲಾಕ್,ದ್ವಿಚಕ್ರ ವಾಹನಗಳ ಲೈಟಿಂಗ್ಸ್, ಹಾರ್ನ್ ಸಾಮಾಗ್ರಿ ತುಟ್ಟಿ ದುಬಾರಿಯಾಗಿದೆ.

ಇನ್ನು ಯಾವೆಲ್ಲ ವಸ್ತುಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನು ಗಮನಿಸೋದಾದರೇ, ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲಾಗಿದ್ದು, ಇ ವಾಹನಗಳ ಜಿ ಎಸ್ ಟಿ ದರವನ್ನು ಶೇಕಡಾ 12ರ ಬದಲು ಶೇಕಡಾ 5ಕ್ಕೆ ಇಳಿಕೆ ಮಾಡಲಾಗಿದೆ. ಗೃಹ ಸಾಲ ಇಳಿಕೆ ಕಿಡ್ನಿ ಕಸಿ, ಡಯಾಲಿಸಿಸ್ ಯಂತ್ರದ ಬೆಲೆ ಇಳಿಕೆ.ಸ್ವದೇಶಿ ಎಲೆಕ್ಟ್ರಾನಿಕ್ ಉತ್ಪನ್ನಗಳು,ಎಲೆಕ್ಟ್ರಿಕ್ ಕಾರು-ಬೈಕ್,ಆನ್ಲೈನ್ ವಹಿವಾಟು ಡಿಜಿಟಲ್ ಪಾವತಿಗೆ ಶುಲ್ಕ ಇಲ್ಲ,ಗೃಹಸಾಲದ ಮೇಲಿನ ಬಡ್ಡಿ ಕಡಿತ,ರಕ್ಷಣಾ ಸಾಮಗ್ರಿ,ಪಾಮ್ ಆಯಿಲ್ಫ್ಯಾಟಿ ಆಯಿಲ್ ಪೇಪರ್ ಅಗ್ಗ ,ಸೌರಫಲಕ, ಇಟ್ಟಿಗೆ, ಕಿವುಡು ಮೂಗರಿಗೆ ಬಳಸುವ ಸಾಧನಗಳು ಮೇಲಿನ ಬೆಲೆ ಇಳಿಕೆಯಾಗಿದೆ. ಒಟ್ಟಿನಲ್ಲಿ 2019 ರಲ್ಲಿ ಮೋದಿ ಬಜೆಟ್ ನಿರಾಶಾದಾಯ ಎಂದೇ ಬಣ್ಣಿಸಲಾಗುತ್ತಿದ್ದು ಮಧ್ಯಮವರ್ಗದ ಜನರ ಜೀವನಕ್ಕೆ ನೆರವಾಗುವಂತ ಯಾವುದೇ ಸೌಲಭ್ಯಗಳಿಲ್ಲ ಎಂಬ ಟೀಕೆಗೊಳಗಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…