ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್ಸ್ಟಾರ್ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್ಗೆ ಆಗಮಿಸಿದ್ದಾರೆ. ಈ ಎಪಿಸೋಡ್ನ ಚಿತ್ರೀಕರಣ ನಡೆದಿದ್ದು, ನವೆಂಬರ್ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್ ಸೀಟ್ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…