News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

51

ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್‌ಸ್ಟಾರ್‌ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್‌ಗೆ ಆಗಮಿಸಿದ್ದಾರೆ. ಈ ಎಪಿಸೋಡ್‌ನ ಚಿತ್ರೀಕರಣ ನಡೆದಿದ್ದು, ನವೆಂಬರ್‌ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್‌ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್‌ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್‌ ಸೀಟ್‌ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್‌ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…