ಸುದ್ದಿ

ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

202

ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ ಸಂಭವಿಸಿತ್ತು. ಆದರೆ ದಕ್ಷಿಣ ಕೊಡಗಿನಲ್ಲಿ ಪ್ರವಾಹ ಬಂದಿತ್ತಾದರೂ ಭೂಕುಸಿತದಂತಹ ಪ್ರಕರಣ ನಡೆದಿರಲಿಲ್ಲ.

ಆದರೆ, ಇದೀಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅದು ಕೂಡ ಭಾರೀ ಮಳೆಯೊಂದಿಗೆ ಬೇರೆ ಬೇರೆ ಸಮಯದಲ್ಲಿ ಬೇರೆ ಬೇರೆ ಕಡೆ ಕಂಪಿಸಿದೆ. ಜತೆಗೆ ಭೂಮಿ ಒಳಗೆ ಏನೋ ಓಡಾಡಿದ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವವಾದ ಬಗ್ಗೆ ಜನರು ಹೇಳಿದ್ದರಿಂದ ಜಿಲ್ಲಾ ಉಪವಿಭಾಗಾಧಿಕಾರಿ ಆದೇಶದ ಮೇರೆಗೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಭೇಟಿ ನೀಡಿ, ಕೆಲವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಯಾವಾಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಬಗ್ಗೆ ಸುದ್ದಿ ಹರಿದಾಡಲು ಆರಂಭವಾಯಿತೋ ಜನರಲ್ಲಿ ಭಯವಂತೂ ಆರಂಭವಾಗಿದೆ. ಈಗಾಗಲೇ ಜಿಲ್ಲಾಡಳಿತ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಬೇಕಾದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಒಂದು ವೇಳೆ ಪ್ರವಾಹ ಭೂಕುಸಿದಂತಹ ದುರಂತಗಳು ನಡೆದರೆ ಏನು ಮಾಡಬೇಕು? ತುರ್ತು ರೀತಿಯ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು? ಮುಂತಾದವುಗಳ ಬಗ್ಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನು ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದ ೪೧೨ ಕುಟುಂಬಗಳು ಬಾಡಿಗೆ ಮನೆಯಲ್ಲಿ ದಿನ ಕಳೆಯುತ್ತಿದ್ದು ಅವರಿಗೆ ಇನ್ನೂ ಸೂರು ಸಿಕ್ಕಿಲ್ಲ. ಇಂತಹ ಕುಟುಂಬಗಳು ಇದುವರೆಗೆ ಬಾಡಿಗೆ ಹಣವಾಗಿ ಒಟ್ಟು 2,91,90,000 ರೂ.ಗಳನ್ನು ಜಿಲ್ಲಾಡಳಿತ ಪಾವತಿ ಮಾಡಿದೆ. ಸಂತ್ರಸ್ತ ಕುಟುಂಬಗಳಿಗೆ ಕಳೆದ ನವೆಂಬರ್ ತಿಂಗಳಿನಿಂದ ಪ್ರತಿ ತಿಂಗಳಿಗೆ 10 ಸಾವಿರ ರೂ.ಗಳಂತೆ ಖಾತೆಗಳಿಗೆ ಬಾಡಿಗೆ ಹಣವನ್ನು ಸಂದಾಯ ಮಾಡಲಾಗುತ್ತಿದೆ.
ಮಡಿಕೇರಿ ನಗರಸಭೆ ವ್ಯಾಪ್ತಿಯ 93 ಕುಟುಂಬ ಗಳಿಗೆ, ಕೆದಕಲು ಗ್ರಾ.ಪಂ. ವ್ಯಾಪ್ತಿಯ 5 ಕುಟುಂಬ, ಮಾದಾಪುರ ಗ್ರಾ.ಪಂ. ವ್ಯಾಪ್ತಿಯ 44 ಕುಟುಂಬಗಳು, ಗರ್ವಾಲೆ ಗ್ರಾಮ ಪಂಚಾಯಿತಿಯ 9 ಕುಟುಂಬಗಳು, ಕಂಬಿಬಾಣೆ ಪಂಚಾಯಿತಿಯ 4 ಕುಟುಂಬಗಳು, ಕೂಡಿಗೆ ಪಂಚಾಯಿತಿಯ 3, ಕೂಡುಮಂಗಳೂರು ಪಂಚಾಯಿತಿಯ 3, ನಂಜರಾಯಪಟ್ಟಣ ಪಂಚಾಯಿತಿಯ 1, ಕಿರಗಂದೂರು ಪಂಚಾಯಿತಿಯ 5, ಬೇಲೂರು ಪಂಚಾಯಿತಿಯ 5, ಐಗೂರು ಪಂಚಾಯಿತಿಯ 1, ನೇರುಗಲಳೆ ಪಂಚಾಯಿತಿಯ 2, ಚೌಡ್ಲು ಪಂಚಾಯ್ತಿಯ 1, ಹಾನಗಲ್ಲು ಪಂಚಾಯಿತಿಯ 5, ಶಾಂತಳ್ಳಿ ಪಂಚಾಯಿತಿಯ 2, ತೋಳೂರು ಶೆಟ್ಟಳ್ಳಿ ಪಂಚಾಯಿತಿಯ 1, ಬೆಟ್ಟದಳ್ಳಿ ಪಂಚಾಯಿತಿ 1, ಕುಶಾಲನಗರ ಪಟ್ಟಣ ಪಂಚಾಯಿತಿಯ 14 ಕುಟುಂಬಗಳಿಗೆ ಬಾಡಿಗೆ ಹಣವನ್ನು ಪಾವತಿ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.