ಸುದ್ದಿ

ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

202

ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ ಸಂಭವಿಸಿತ್ತು. ಆದರೆ ದಕ್ಷಿಣ ಕೊಡಗಿನಲ್ಲಿ ಪ್ರವಾಹ ಬಂದಿತ್ತಾದರೂ ಭೂಕುಸಿತದಂತಹ ಪ್ರಕರಣ ನಡೆದಿರಲಿಲ್ಲ.

ಆದರೆ, ಇದೀಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅದು ಕೂಡ ಭಾರೀ ಮಳೆಯೊಂದಿಗೆ ಬೇರೆ ಬೇರೆ ಸಮಯದಲ್ಲಿ ಬೇರೆ ಬೇರೆ ಕಡೆ ಕಂಪಿಸಿದೆ. ಜತೆಗೆ ಭೂಮಿ ಒಳಗೆ ಏನೋ ಓಡಾಡಿದ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವವಾದ ಬಗ್ಗೆ ಜನರು ಹೇಳಿದ್ದರಿಂದ ಜಿಲ್ಲಾ ಉಪವಿಭಾಗಾಧಿಕಾರಿ ಆದೇಶದ ಮೇರೆಗೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಭೇಟಿ ನೀಡಿ, ಕೆಲವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಯಾವಾಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಬಗ್ಗೆ ಸುದ್ದಿ ಹರಿದಾಡಲು ಆರಂಭವಾಯಿತೋ ಜನರಲ್ಲಿ ಭಯವಂತೂ ಆರಂಭವಾಗಿದೆ. ಈಗಾಗಲೇ ಜಿಲ್ಲಾಡಳಿತ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಬೇಕಾದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಒಂದು ವೇಳೆ ಪ್ರವಾಹ ಭೂಕುಸಿದಂತಹ ದುರಂತಗಳು ನಡೆದರೆ ಏನು ಮಾಡಬೇಕು? ತುರ್ತು ರೀತಿಯ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು? ಮುಂತಾದವುಗಳ ಬಗ್ಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನು ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದ ೪೧೨ ಕುಟುಂಬಗಳು ಬಾಡಿಗೆ ಮನೆಯಲ್ಲಿ ದಿನ ಕಳೆಯುತ್ತಿದ್ದು ಅವರಿಗೆ ಇನ್ನೂ ಸೂರು ಸಿಕ್ಕಿಲ್ಲ. ಇಂತಹ ಕುಟುಂಬಗಳು ಇದುವರೆಗೆ ಬಾಡಿಗೆ ಹಣವಾಗಿ ಒಟ್ಟು 2,91,90,000 ರೂ.ಗಳನ್ನು ಜಿಲ್ಲಾಡಳಿತ ಪಾವತಿ ಮಾಡಿದೆ. ಸಂತ್ರಸ್ತ ಕುಟುಂಬಗಳಿಗೆ ಕಳೆದ ನವೆಂಬರ್ ತಿಂಗಳಿನಿಂದ ಪ್ರತಿ ತಿಂಗಳಿಗೆ 10 ಸಾವಿರ ರೂ.ಗಳಂತೆ ಖಾತೆಗಳಿಗೆ ಬಾಡಿಗೆ ಹಣವನ್ನು ಸಂದಾಯ ಮಾಡಲಾಗುತ್ತಿದೆ.
ಮಡಿಕೇರಿ ನಗರಸಭೆ ವ್ಯಾಪ್ತಿಯ 93 ಕುಟುಂಬ ಗಳಿಗೆ, ಕೆದಕಲು ಗ್ರಾ.ಪಂ. ವ್ಯಾಪ್ತಿಯ 5 ಕುಟುಂಬ, ಮಾದಾಪುರ ಗ್ರಾ.ಪಂ. ವ್ಯಾಪ್ತಿಯ 44 ಕುಟುಂಬಗಳು, ಗರ್ವಾಲೆ ಗ್ರಾಮ ಪಂಚಾಯಿತಿಯ 9 ಕುಟುಂಬಗಳು, ಕಂಬಿಬಾಣೆ ಪಂಚಾಯಿತಿಯ 4 ಕುಟುಂಬಗಳು, ಕೂಡಿಗೆ ಪಂಚಾಯಿತಿಯ 3, ಕೂಡುಮಂಗಳೂರು ಪಂಚಾಯಿತಿಯ 3, ನಂಜರಾಯಪಟ್ಟಣ ಪಂಚಾಯಿತಿಯ 1, ಕಿರಗಂದೂರು ಪಂಚಾಯಿತಿಯ 5, ಬೇಲೂರು ಪಂಚಾಯಿತಿಯ 5, ಐಗೂರು ಪಂಚಾಯಿತಿಯ 1, ನೇರುಗಲಳೆ ಪಂಚಾಯಿತಿಯ 2, ಚೌಡ್ಲು ಪಂಚಾಯ್ತಿಯ 1, ಹಾನಗಲ್ಲು ಪಂಚಾಯಿತಿಯ 5, ಶಾಂತಳ್ಳಿ ಪಂಚಾಯಿತಿಯ 2, ತೋಳೂರು ಶೆಟ್ಟಳ್ಳಿ ಪಂಚಾಯಿತಿಯ 1, ಬೆಟ್ಟದಳ್ಳಿ ಪಂಚಾಯಿತಿ 1, ಕುಶಾಲನಗರ ಪಟ್ಟಣ ಪಂಚಾಯಿತಿಯ 14 ಕುಟುಂಬಗಳಿಗೆ ಬಾಡಿಗೆ ಹಣವನ್ನು ಪಾವತಿ ಮಾಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…