ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.
ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.
ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.
ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…