ಸುದ್ದಿ

884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

355

ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಆರೋಗ್ಯ

    ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

    ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…