ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.
ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…