News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

565

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.