News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

561

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…