ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ.
ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ ಮತ್ತು ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ. ಏಳು ಕುದುರೆಗಳುಳ್ಳ ರಥವು ಸೂರ್ಯದೇವನ ವಾಹನವಾಗಿದ್ದು, ಈತ ದೇಹದಲ್ಲಿನ 7 ಚಕ್ರಗಳನ್ನು ಹಾಗೂ ಕಾಮನಬಿಲ್ಲಿನ 7 ಬಣ್ಣಗಳನ್ನು ಪ್ರತಿನಿಧಿಸುತ್ತಾನೆ.
ಹಿಂದೂ ಧರ್ಮದಲ್ಲಿ ನಾಗರಹಾವನ್ನು ಹೊರತುಪಡಿಸಿ ಕಣ್ಣಿಗೆ ಕಾಣುವ ದೇವರೆಂದು ಸೂರ್ಯದೇವನನ್ನು ಕರೆಯುತ್ತಾರೆ. ಈತನನ್ನು ಪ್ರತಿದಿನವು ನಾವು ನೋಡಬಹುದಾಗಿದೆ. ಪ್ರತಿದಿನವು ಈತನಿಂದಲೇ ಆರಂಭ, ಈತನಿಂದಲೇ ಅಂತ್ಯ. ಶೈವ ಧರ್ಮದಲ್ಲಿ ಸೂರ್ಯನನ್ನು ಶಿವನೆಂದು, ವೈಷ್ಣವ ಧರ್ಮದಲ್ಲಿ ವಿಷ್ಣುವೆಂದು ಪೂಜಿಸುತ್ತಾರೆ. ಸೂರ್ಯನನ್ನು ವೈವಸ್ವತ, ರವಿ, ಆದಿತ್ಯ, ಪುಷ, ದಿವಾಕರ, ಸವಿತಾ, ಅರ್ಕ, ಮಿತ್ರ, ಭಾನು, ಭಾಸ್ಕರ ಮತ್ತು ಗ್ರಹಪತಿ ಅಥವಾ ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ.
ಈಗಾಗಲೇ ಹೇಳಿರುವ ಹಾಗೇ ಹಿಂದೂ ಧರ್ಮದ ಪ್ರಮುಖ ದೇವರಾದ ಸೂರ್ಯನು ಕತ್ತಲನ್ನು ನಿವಾರಿಸಿ ಬೆಳಕನ್ನು ಹೊರಸೂಸುತ್ತಾನೆ. ಇದರರ್ಥ ಜಗತ್ತಿನಲ್ಲಿ ಅಜ್ಞಾನವನ್ನು ತೊಡೆದು ಹಾಕಿ ಸುಜ್ಞಾನವು ಬೆಳಗುವಂತೆ ಮಾಡುತ್ತಾನೆ. ಸೂರ್ಯ ದೇವನ ಕಿರಣಗಳಿಗೆ ಜನ ಜೀವನ ವನ್ನು ಸಂರಕ್ಷಿಸುವ, ಸಂಹಾರ ಮಾಡುವ ಎರಡೂ ಗುಣವೂ ಇದೆ. ಈತನ ಕೋಪಕ್ಕೆ ಕಾರಣರಾದವರು ಈತನ ಕಿರಣಗಳಿಂದಲೇ ಸುಟ್ಟು ಬಸ್ಮರಾಗುತ್ತಾರೆ. ಪ್ರತಿದಿನವು ಬೆಳಗಿನಿಂದ ಸಂಜೆಯವರೆಗೆ ಒಳಿತನ್ನು ಮಾಡುವ ಸೂರ್ಯದೇವನನ್ನು ಪೂಜಿಸಿದರೆ ಪ್ರತಿನಿತ್ಯದ ಕಷ್ಟವು ದೂರಾಗುತ್ತದೆ.
ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರಥ ಸಪ್ತಮಿಯ ದಿನದಂದು ನಡೆದುಕೊಂಡು ಬಂದಿರುವ ರೂಢಿ. ಎಕ್ಕದ ಎಲೆಗಳನ್ನು ಮೇಲೆ ಹೇಳಿರುವ ದೇಹದ ಭಾಗಗಳಿಗೆ ಇಟ್ಟುಕೊಂಡು ಸ್ನಾನ ಮಾಡಿದ ನಂತರ, ಸೂರ್ಯನ 108 ಹೆಸರುಗಳನ್ನು ಉಚ್ಛರಿಸಿ ಸೂರ್ಯ ನಮಸ್ಕಾರ ಮಾಡುವ ಪದ್ಧತಿಯೂ ಇದೆ. ಒಂದು ವೇಳೆ 108 ನಾಮಗಳನ್ನು ಹೇಳಿಕೊಳ್ಳಲು ಸಾಧ್ಯವಾಗದೇ ಇದ್ದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ ಎಂಬ ಸೂರ್ಯನ 12 ನಾಮಗಳನ್ನು ಜಪಿಸಿ ನಮಸ್ಕಾರ ಮಾಡಬಹುದಾಗಿದೆ.
ಸೂರ್ಯನ ಪಥ ಬದಲಾವಣೆಯಾಗುವುದರಿಂದ ಮಾಘಮಾಸದಿಂದ ಮುಂದಕ್ಕೆ ಚಳಿ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿಯೂ ರಥಸಪ್ತಮಿಯ ಆಚರಣೆಯನ್ನು ನೋಡಬಹುದಾಗಿದ್ದು, ರಥಸಪ್ತಮಿ ಎಂಬ ಹೆಸರು ಸೂರ್ಯನ ರಥಕ್ಕೂ ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಗೂ ಸಂಬಂಧಿಸಿದ್ದನ್ನು ಸೂಚಿಸುತ್ತದೆ. ಸೂರ್ಯನ ಸಾರಥಿಯಾದ ಅರುಣ (ಅನೂರು) ರಥವನ್ನು ಉತ್ತರದತ್ತ ಮುನ್ನಡೆಸೆ, ಈಶಾನ್ಯ ದಿಕ್ಕಿಗೆ ಚಲಿಸುತ್ತಾನೆ. ಸೂರ್ಯನ ರಥದ ಚಕ್ರಗಳು ಕಾಲವನ್ನು, ಏಳು ಕುದುರೆಗಳು ಏಳು ಬಣ್ಣಗಳ ಹಾಗೂ ಏಳು ವಾರಗಳ ಪ್ರತಿನಿಧಿಗಳಾಗಿವೆ.
*ಇನ್ನು ರಥಸಪ್ತಮಿಯ ದಿನದಂದು ಬಳಸುವ ಎಕ್ಕದ ಎಲೆಗಳ ಬಗ್ಗೆ ಹೇಳುವುದಾದರೆ ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಥ ಸಪ್ತಮಿಯಂದು ಮುಂಜಾನೆಯೇ ಎದ್ದು ಎಕ್ಕದ ಎಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಇಟ್ಟುಕೊಂಡು ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ*. ಈ ಹಿನ್ನೆಲೆಯಲ್ಲಿ ರಥಸಪ್ತಮಿಯ ದಿನದಂದು ಎಕ್ಕದ ಎಲೆಗಳನ್ನು ಮೈಮೇಲೆ ಇಟ್ಟುಕೊಂಡು ಸ್ನಾನ ಮಾಡುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
*”ರಥ ಸಪ್ತಮಿ ಸ್ನಾನ ಮಂತ್ರ”* –
ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು
*ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |*
*ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ ||*
ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., … ರಥಸಪ್ತಮಿ ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _ಶುಭಕೃತ್ ನಾಮ_ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ.
*ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |*
*ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |*
*ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ |*
*ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |*
*ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |*
*ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |*
*ಸೂರ್ಯ ಅರ್ಘ್ಯ ಮಂತ್ರ –*
ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ |
*ಸೂರ್ಯ ಮಂತ್ರಗಳು:*
ಸೂರ್ಯ ದೇವನನ್ನು ಮನಸ್ಸಾದಗಲೆಲ್ಲಾ ಪೂಜಿಸುವಂತಿಲ್ಲ. ಆತನನ್ನು ಪೂಜಿಸಲು ಪ್ರತ್ಯಕ ಸಮಯವಿದೆ. ಮುಂಜಾನೆ ಸೂರ್ಯ ಹುಟ್ಟಿದಾಕ್ಷಣ ಸ್ನಾನ ಮಾಡಿ ಪರಿಶುದ್ಧ ಮನಸ್ಸಿನಿಂದ ಆತನನ್ನು ಪೂಜಿಸಬೇಕು. ಸೂರ್ಯನನ್ನು ಪೂಜಿಸುವಾಗ ಪಠಿಸಬೇಕಾದ ಮಂತ್ರಗಳು ಹೀಗಿವೆ:
*ಸೂರ್ಯ ಮಂತ್ರ:*
ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಈ ಮಂತ್ರವು ಸೂರ್ಯದೇವನನ್ನು ಹೊಗಳುವ ಮಂತ್ರವಾಗಿದೆ. ಈ ಮಂತ್ರದಲ್ಲಿ ಸೂರ್ಯನನ್ನು ಬ್ರಹ್ಮಾಂಡದ ಅಧಿಪತಿಯೆಂದು ಹೊಗಳಲಾಗುತ್ತದೆ. ಉತ್ತಮ ಆರೋಗ್ಯ, ಐಶ್ವರ್ಯ ಮತ್ತು ಸಮೃದ್ಧಿಗಾಗಿ ಭಕ್ತರು ಸೂರ್ಯದೇವನನ್ನು ಪ್ರಾರ್ಥಿಸಲಾಗುತ್ತದೆ. ಮಾನವನ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಈ ಮಂತ್ರಕ್ಕಿದೆ ಎಂದು ನಂಬಲಾಗಿದೆ.
*ಸೂರ್ಯ ಗಾಯತ್ರಿ ಮಂತ್ರ:*
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
*ಸೂರ್ಯ ವಶೀಕರಣ ಮಂತ್ರ:*
ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ ಪರಾಕ್ರಮಾಯ ನವಗ್ರಹ
ದಶದಿಕ್ಪಾಲ ಲಕ್ಷ್ಮಿ ದೇವತಾಯ ಧರ್ಮಕರ್ಮ ಸಹಿತಾಯ ಅಮುಕ ನಾಥಾಯ ನಾಥಾಯ ನಾಮ ಮೋಹಾಯ ಮೋಹಾಯ
ಆಕರ್ಶಯ ಆಕರ್ಶಯ ದಾಸಾನುದಾಸಂ ಕುರು ಕುರು ವಶಂ ಕುರು ಕುರು ಸ್ವಾಹಾ
*ಈ ಮಂತ್ರವನ್ನು ಪಠಿಸಲಿಚ್ಛಿಸುವವರು ಸ್ನಾನ ಮಾಡಿ ಶುದ್ಧತೆಯಿಂದ ಈ ಮಂತ್ರವನ್ನು ಪಠಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಸಂಬಂಧಿಸಿದ ಸಮಸ್ಯೆಗಳನ್ನು, ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸುತ್ತದೆ*.🙏
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…