ಉಪಯುಕ್ತ ಮಾಹಿತಿ

ರಥಸಪ್ತಮಿ ಮಹತ್ವ?

77
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?*

ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ.
ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ ಮತ್ತು ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ. ಏಳು ಕುದುರೆಗಳುಳ್ಳ ರಥವು ಸೂರ್ಯದೇವನ ವಾಹನವಾಗಿದ್ದು, ಈತ ದೇಹದಲ್ಲಿನ 7 ಚಕ್ರಗಳನ್ನು ಹಾಗೂ ಕಾಮನಬಿಲ್ಲಿನ 7 ಬಣ್ಣಗಳನ್ನು ಪ್ರತಿನಿಧಿಸುತ್ತಾನೆ.

ಹಿಂದೂ ಧರ್ಮದಲ್ಲಿ ನಾಗರಹಾವನ್ನು ಹೊರತುಪಡಿಸಿ ಕಣ್ಣಿಗೆ ಕಾಣುವ ದೇವರೆಂದು ಸೂರ್ಯದೇವನನ್ನು ಕರೆಯುತ್ತಾರೆ. ಈತನನ್ನು ಪ್ರತಿದಿನವು ನಾವು ನೋಡಬಹುದಾಗಿದೆ. ಪ್ರತಿದಿನವು ಈತನಿಂದಲೇ ಆರಂಭ, ಈತನಿಂದಲೇ ಅಂತ್ಯ. ಶೈವ ಧರ್ಮದಲ್ಲಿ ಸೂರ್ಯನನ್ನು ಶಿವನೆಂದು, ವೈಷ್ಣವ ಧರ್ಮದಲ್ಲಿ ವಿಷ್ಣುವೆಂದು ಪೂಜಿಸುತ್ತಾರೆ. ಸೂರ್ಯನನ್ನು ವೈವಸ್ವತ, ರವಿ, ಆದಿತ್ಯ, ಪುಷ, ದಿವಾಕರ, ಸವಿತಾ, ಅರ್ಕ, ಮಿತ್ರ, ಭಾನು, ಭಾಸ್ಕರ ಮತ್ತು ಗ್ರಹಪತಿ ಅಥವಾ ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ.

ಈಗಾಗಲೇ ಹೇಳಿರುವ ಹಾಗೇ ಹಿಂದೂ ಧರ್ಮದ ಪ್ರಮುಖ ದೇವರಾದ ಸೂರ್ಯನು ಕತ್ತಲನ್ನು ನಿವಾರಿಸಿ ಬೆಳಕನ್ನು ಹೊರಸೂಸುತ್ತಾನೆ. ಇದರರ್ಥ ಜಗತ್ತಿನಲ್ಲಿ ಅಜ್ಞಾನವನ್ನು ತೊಡೆದು ಹಾಕಿ ಸುಜ್ಞಾನವು ಬೆಳಗುವಂತೆ ಮಾಡುತ್ತಾನೆ. ಸೂರ್ಯ ದೇವನ ಕಿರಣಗಳಿಗೆ ಜನ ಜೀವನ ವನ್ನು ಸಂರಕ್ಷಿಸುವ, ಸಂಹಾರ ಮಾಡುವ ಎರಡೂ ಗುಣವೂ ಇದೆ. ಈತನ ಕೋಪಕ್ಕೆ ಕಾರಣರಾದವರು ಈತನ ಕಿರಣಗಳಿಂದಲೇ ಸುಟ್ಟು ಬಸ್ಮರಾಗುತ್ತಾರೆ. ಪ್ರತಿದಿನವು ಬೆಳಗಿನಿಂದ ಸಂಜೆಯವರೆಗೆ ಒಳಿತನ್ನು ಮಾಡುವ ಸೂರ್ಯದೇವನನ್ನು ಪೂಜಿಸಿದರೆ ಪ್ರತಿನಿತ್ಯದ ಕಷ್ಟವು ದೂರಾಗುತ್ತದೆ.

ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರಥ ಸಪ್ತಮಿಯ ದಿನದಂದು ನಡೆದುಕೊಂಡು ಬಂದಿರುವ ರೂಢಿ. ಎಕ್ಕದ ಎಲೆಗಳನ್ನು ಮೇಲೆ ಹೇಳಿರುವ ದೇಹದ ಭಾಗಗಳಿಗೆ ಇಟ್ಟುಕೊಂಡು ಸ್ನಾನ ಮಾಡಿದ ನಂತರ, ಸೂರ್ಯನ 108 ಹೆಸರುಗಳನ್ನು ಉಚ್ಛರಿಸಿ ಸೂರ್ಯ ನಮಸ್ಕಾರ ಮಾಡುವ ಪದ್ಧತಿಯೂ ಇದೆ. ಒಂದು ವೇಳೆ 108 ನಾಮಗಳನ್ನು ಹೇಳಿಕೊಳ್ಳಲು ಸಾಧ್ಯವಾಗದೇ ಇದ್ದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ ಎಂಬ ಸೂರ್ಯನ 12 ನಾಮಗಳನ್ನು ಜಪಿಸಿ ನಮಸ್ಕಾರ ಮಾಡಬಹುದಾಗಿದೆ.

ಸೂರ್ಯನ ಪಥ ಬದಲಾವಣೆಯಾಗುವುದರಿಂದ ಮಾಘಮಾಸದಿಂದ ಮುಂದಕ್ಕೆ ಚಳಿ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿಯೂ ರಥಸಪ್ತಮಿಯ ಆಚರಣೆಯನ್ನು ನೋಡಬಹುದಾಗಿದ್ದು, ರಥಸಪ್ತಮಿ ಎಂಬ ಹೆಸರು ಸೂರ್ಯನ ರಥಕ್ಕೂ ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಗೂ ಸಂಬಂಧಿಸಿದ್ದನ್ನು ಸೂಚಿಸುತ್ತದೆ. ಸೂರ್ಯನ ಸಾರಥಿಯಾದ ಅರುಣ (ಅನೂರು) ರಥವನ್ನು ಉತ್ತರದತ್ತ ಮುನ್ನಡೆಸೆ, ಈಶಾನ್ಯ ದಿಕ್ಕಿಗೆ ಚಲಿಸುತ್ತಾನೆ. ಸೂರ್ಯನ ರಥದ ಚಕ್ರಗಳು ಕಾಲವನ್ನು, ಏಳು ಕುದುರೆಗಳು ಏಳು ಬಣ್ಣಗಳ ಹಾಗೂ ಏಳು ವಾರಗಳ ಪ್ರತಿನಿಧಿಗಳಾಗಿವೆ.

*ಇನ್ನು ರಥಸಪ್ತಮಿಯ ದಿನದಂದು ಬಳಸುವ ಎಕ್ಕದ ಎಲೆಗಳ ಬಗ್ಗೆ ಹೇಳುವುದಾದರೆ ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಥ ಸಪ್ತಮಿಯಂದು ಮುಂಜಾನೆಯೇ ಎದ್ದು ಎಕ್ಕದ ಎಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಇಟ್ಟುಕೊಂಡು ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ*. ಈ ಹಿನ್ನೆಲೆಯಲ್ಲಿ ರಥಸಪ್ತಮಿಯ ದಿನದಂದು ಎಕ್ಕದ ಎಲೆಗಳನ್ನು ಮೈಮೇಲೆ ಇಟ್ಟುಕೊಂಡು ಸ್ನಾನ ಮಾಡುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
*”ರಥ ಸಪ್ತಮಿ ಸ್ನಾನ ಮಂತ್ರ”* –
ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು

*ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |*

*ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ ||*

ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., … ರಥಸಪ್ತಮಿ ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _ಶುಭಕೃತ್ ನಾಮ_ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ.

*ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |*
*ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |*
*ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ |*
*ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |*
*ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |*
*ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |*

*ಸೂರ್ಯ ಅರ್ಘ್ಯ ಮಂತ್ರ –*
ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ |
*ಸೂರ್ಯ ಮಂತ್ರಗಳು:*
ಸೂರ್ಯ ದೇವನನ್ನು ಮನಸ್ಸಾದಗಲೆಲ್ಲಾ ಪೂಜಿಸುವಂತಿಲ್ಲ. ಆತನನ್ನು ಪೂಜಿಸಲು ಪ್ರತ್ಯಕ ಸಮಯವಿದೆ. ಮುಂಜಾನೆ ಸೂರ್ಯ ಹುಟ್ಟಿದಾಕ್ಷಣ ಸ್ನಾನ ಮಾಡಿ ಪರಿಶುದ್ಧ ಮನಸ್ಸಿನಿಂದ ಆತನನ್ನು ಪೂಜಿಸಬೇಕು. ಸೂರ್ಯನನ್ನು ಪೂಜಿಸುವಾಗ ಪಠಿಸಬೇಕಾದ ಮಂತ್ರಗಳು ಹೀಗಿವೆ:

*ಸೂರ್ಯ ಮಂತ್ರ:*
ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್‌ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ

ಈ ಮಂತ್ರವು ಸೂರ್ಯದೇವನನ್ನು ಹೊಗಳುವ ಮಂತ್ರವಾಗಿದೆ. ಈ ಮಂತ್ರದಲ್ಲಿ ಸೂರ್ಯನನ್ನು ಬ್ರಹ್ಮಾಂಡದ ಅಧಿಪತಿಯೆಂದು ಹೊಗಳಲಾಗುತ್ತದೆ. ಉತ್ತಮ ಆರೋಗ್ಯ, ಐಶ್ವರ್ಯ ಮತ್ತು ಸಮೃದ್ಧಿಗಾಗಿ ಭಕ್ತರು ಸೂರ್ಯದೇವನನ್ನು ಪ್ರಾರ್ಥಿಸಲಾಗುತ್ತದೆ. ಮಾನವನ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಈ ಮಂತ್ರಕ್ಕಿದೆ ಎಂದು ನಂಬಲಾಗಿದೆ.

*ಸೂರ್ಯ ಗಾಯತ್ರಿ ಮಂತ್ರ:*

ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್

*ಸೂರ್ಯ ವಶೀಕರಣ ಮಂತ್ರ:*
ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ ಪರಾಕ್ರಮಾಯ ನವಗ್ರಹ
ದಶದಿಕ್ಪಾಲ ಲಕ್ಷ್ಮಿ ದೇವತಾಯ ಧರ್ಮಕರ್ಮ ಸಹಿತಾಯ ಅಮುಕ ನಾಥಾಯ ನಾಥಾಯ ನಾಮ ಮೋಹಾಯ ಮೋಹಾಯ
ಆಕರ್ಶಯ ಆಕರ್ಶಯ ದಾಸಾನುದಾಸಂ ಕುರು ಕುರು ವಶಂ ಕುರು ಕುರು ಸ್ವಾಹಾ

*ಈ ಮಂತ್ರವನ್ನು ಪಠಿಸಲಿಚ್ಛಿಸುವವರು ಸ್ನಾನ ಮಾಡಿ ಶುದ್ಧತೆಯಿಂದ ಈ ಮಂತ್ರವನ್ನು ಪಠಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಸಂಬಂಧಿಸಿದ ಸಮಸ್ಯೆಗಳನ್ನು, ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸುತ್ತದೆ*.🙏

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಸೌದಿಯಲ್ಲಿ ಈಗ ಯೋಗಕ್ಕೆ ನೀಡಲಾಗಿದೆ ಕ್ರೀಡೆಯ ಮಾನ್ಯತೆ..!ತಿಳಿಯಲು ಈ ಲೇಖನ ಓದಿ…

    ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್‌ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…