News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು

ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

108

ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ.
ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು.
ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ ನಂತರ ವೈಭವದಿಂದ ರಾವಣೋತ್ಸವವನ್ನು ಆಚರಿಸಲಾಗುತ್ತದೆ.
ಶ್ರೀರಾಮ, ಹನುಮ ಈ ನಾಡಿನ ಪ್ರಮುಖ ದೈವವಾಗಿದ್ದು, ಹನುಮನಿಲ್ಲದ ಊರೇ ಇಲ್ಲ ಎಂಬ ಪ್ರತೀತಿಯೂ ಇದೆ. ಆದರೆ ರಾಮನಿಗೆ ವೈರಿಯಾಗಿ ಸೀತಾಮಾತೆಯನ್ನು ಹೊತ್ತೊಯ್ದು ಕಿರುಕುಳ ನೀಡಿ ಕೊನೆಗೆ ರಾಮನಿಂದಲೇ ಹತನಾಗುವ ರಕ್ಕಸ ರಾವಣನಿಗೂ ಪೂಜೆ ನಡೆಯುತ್ತದೆ ಎಂದರೆ ವಿಶಿಷ್ಟವೇ ಅಲ್ಲವೇ?


ಶಿವಭಕ್ತ ರಾವಣನಿಗೂ
ವಿಶೇಷ ಪೂಜೆ
ಇಂತಹದೊAದು ಅಪರೂಪದ, ವೈಭವದ ಪೂಜೆ ಶಿವಭಕ್ತ ರಾವಣನಿಗೂ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ಅನಾದಿ ಕಾಲದಿಂದಲೂ ಜನತೆ ಸಲ್ಲಿಸುತ್ತಾ ಬಂದಿದ್ದಾರೆ.
ಸುಗಟೂರು, ವಕ್ಕಲೇರಿ ಗ್ರಾಮದಲ್ಲಿ ರಾವಣೋತ್ಸವಕ್ಕೆ ವಿಶಿಷ್ಟ ಪ್ರಧಾನ್ಯತೆ ನೀಡಲಾಗುತ್ತದೆ, ಇಡೀ ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ, ಬೃಹತ್ ಪುಷ್ಪ ಪಲ್ಲಕ್ಕಿಯಲ್ಲಿ 10 ತಲೆಗಳನ್ನೊತ್ತ ಬೃಹತ್ ಗಾತ್ರದ ರಾವಣನನ್ನು ಪ್ರತಿಷ್ಟಾಪಿಸಲಾಗುತ್ತದೆ.


ಈ ಬೃಹತ್ ಪುಷ್ಪಪಲ್ಲಕ್ಕಿಯಲ್ಲಿ ಕೆಳಭಾಗದಲ್ಲಿ ರಾವಣ ಮತ್ತು ಮೇಲೆ ಶಿವನನ್ನು ಇಟ್ಟು ಪೂಜಿಸುವ ವೈಭವದ ಉತ್ಸವ ಇಲ್ಲಿ ನಡೆಯುತ್ತಾ ಬಂದಿದೆ.
ಗ್ರಾಮದ ಜನತೆ ಮಾತ್ರ ಮೊದಲು ಮಾರ್ಕಂಡೇಶ್ವರಸ್ವಾಮಿಯ ಭವ್ಯ ರಥೋತ್ಸವ, ಪೂಜಾ ಕಾರ್ಯಗಳನ್ನು ಮುಗಿಸಿದ ನಂತರ ರಥೋತ್ಸವ ಜಾತ್ರೆಯ ಅಂತಿಮ ದಿನ ಶಿವ ಭಕ್ತ ರಾವಣನನ್ನು ಸಹಾ ಅಷ್ಟೇ ಭಕ್ತಿಯಿಂದ ಪೂಜಿಸಿ, ಆರಾಧಿಸುತ್ತಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…