News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

28

ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್‌ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್‌ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್‌ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್‌ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…