ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…