ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

85

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….