ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.
ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…