News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

85

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಸುದ್ದಿ

    ಪರೀಕ್ಷೆ ನಡಸೆ ಬೇಕಂದ್ರೆ ವಿದ್ಯಾರ್ಥಿ ಹೆಸರಿನಲ್ಲಿ 50 ಲಕ್ಷ, ಶಿಕ್ಷಕರಿಗೆ 25 ಲಕ್ಷ, ಡೆಪಾಸಿಟ್ ಮಾಡಿ . ವಾಟಾಳ್ ನಾಗರಾಜ್ ಆಕ್ರೋಶ.

    ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.