News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

86

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…