News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

87

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

    ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…