News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

69

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…